ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm