ಬ್ರೇಕಿಂಗ್ ನ್ಯೂಸ್
13-02-21 02:30 pm Source: FILMIBEAT Bharath Kumar K ಸಿನಿಮಾ
ಮದುವೆ ಆದ್ಮೇಲೆ ಚಿತ್ರರಂಗದಿಂದ ಹಿಂದೆ ಸರಿದಿದ್ದ ನಟಿ ಶಾಲಿನಿ ಅಜಿತ್ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ. ಸುಮಾರು 20 ವರ್ಷದ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಮಣಿರತ್ನಂ ನಿರ್ದೇಶನ ಮಾಡಲಿರುವ ಮೆಗಾ ಚಿತ್ರದಲ್ಲಿ ಶಾಲಿನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಶಾಲಿನಿ ನಟಿಸಲಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಪ್ರಾಜೆಕ್ಟ್ಗೆ ಈಗ ಶಾಲಿನಿ ಸರ್ಪ್ರೈಸ್ ಎಂಟ್ರಿಯಾಗಿದ್ದಾರೆ.
ಹೈದರಾಬಾದ್ಗೆ ತೆರಳಲಿದ್ದಾರೆ ಶಾಲಿನಿ?
ಮೊದಲ ಹಂತದಲ್ಲಿ ಚಿತ್ರೀಕರಣ ಮುಗಿಸಿರುವ ಪೊನ್ನಿಯನ್ ಸೆಲ್ವನ್ ಸಿನಿಮಾತಂಡ ಈಗ ಎರಡನೇ ಶೆಡ್ಯೂಲ್ ಆರಂಭಿಸಿದೆ. ಸದ್ಯದಲ್ಲೇ ಅಜಿತ್ ಅವರ ಪತ್ನಿ ಶಾಲಿನಿ ಹೈದರಾಬಾದ್ಗೆ ತೆರಳಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸದ್ಯಕ್ಕೆ ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಹಿರಂಗವಾಗಿಲ್ಲವಾದರೂ ಇದೊಂದು ಪ್ರಮುಖ ಪಾತ್ರ ಎಂದು ಹೇಳಲಾಗಿದೆ.

ಶಾಲಿನಿ ಕೊನೆಯ ಚಿತ್ರ ಯಾವುದು?
2000ನೇ ಇಸವಿಯಲ್ಲಿ ನಟ ಅಜಿತ್ ಅವರ ಕೈಹಿಡಿದ ಶಾಲಿನಿ ವೈವಾಹಿಕ ಜೀವನ ಆರಂಭಿಸಿದರು. 2001ರಲ್ಲಿ ಬಿಡುಗಡೆಯಾಗಿದ್ದ 'ಪರಿಯಾಧ ವಾರಂ ವೇಂಡುಂ' (Piriyadha Varam Vendum) ಚಿತ್ರದಲ್ಲಿ ಕೊನೆದಾಗಿ ಶಾಲಿನಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ತಮಿಳು ನಟ ಪ್ರಶಾಂತ್ ನಾಯಕರಾಗಿದ್ದರು.

ಶಾಲಿನಿ ಸಿನಿಮಾಗಳು ಕುರಿತು
ಶಾಲಿನಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ ಹಾಗು ಮಲಯಾಳಂ ಭಾಷೆಯಲ್ಲಿ ಬಾಲನಟಿಯಾಗಿ ಸಿನಿ ಜರ್ನಿ ಆರಂಭಿಸಿದ್ದರು. 1986ರಲ್ಲಿ ರಿಲೀಸ್ ಆಗಿದ್ದ ವಿಷ್ಣುವರ್ಧನ್ ಅವರ ಚಿತ್ರ ''ಈ ಜೀವ ನಿನಗಾಗಿ'' ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪುಟ್ಟ ಬಾಲಕಿ ಇದೇ ಶಾಲಿನಿ. 1997ರಲ್ಲಿ ಮಲಯಾಳಂ ಚಿತ್ರದಲ್ಲಿ ಚೊಚ್ಚಲ ಬಾರಿಗೆ ನಾಯಕಿಯಾಗಿ ನಟಿಸಿದ್ದರು.

ಪೊನ್ನಿಯನ್ ಸೆಲ್ವನ್ ಚಿತ್ರದ ಕುರಿತು
ಮಣಿರತ್ನಂ ಅವರ ಮೆಗಾಪ್ರಾಜೆಕ್ಟ್ನಲ್ಲಿ ನಟಿ ತ್ರಿಷಾ, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ಅಮಿತಾಭ್ ಬಚ್ಚನ್, ಚಿಯಾನ್ ವಿಕ್ರಂ, ಶೋಭಿತಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
This News Article is a Copy of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am