ಬ್ರೇಕಿಂಗ್ ನ್ಯೂಸ್
13-02-21 02:36 pm Source: FILMIBEAT Manjunatha C ಸಿನಿಮಾ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸುದ್ದಿಗೆ ಗ್ರಾಸವಾಗಿದ್ದ ನಟಿ ಸಂಜನಾ ಗಲ್ರಾನಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ದೊರೆತು ಜೈಲಿನಿಂದ ಹೊರ ಬಂದ ಬಳಿಕ ಯಾರ ಕೈಗೂ ಸಿಗದೆ, ಮಾಧ್ಯಮಗಳಿಂದಲೂ ದೂರವಿದ್ದ ನಟಿ ಸಂಜನಾ ಗಲ್ರಾನಿ, ಇದೀಗ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ತಾವು ಅನುಭವಿಸಿದ ಕಷ್ಟದ ದಿನಗಳು, ಭವಿಷ್ಯದ ಯೋಜನೆಗಳ ಜೊತೆ-ಜೊತೆಗೆ ತಮ್ಮ ಮದುವೆ ಹಾಗೂ ಇಸ್ಲಾಂ ಮತಾಂತರವಾದ ಬಗ್ಗೆಯೂ ಮಾತನಾಡಿದ್ದಾರೆ.
'ನನ್ನ ಮುಂದಿನ ಹಾದಿ ಬಹಳ ಕಠಿಣವಾಗಿರಲಿದೆ ಎಂಬ ಅರಿವಿದೆ. ನನಗೆ ಎದುರುಗೊಳ್ಳುವ ಎಲ್ಲ ಸಮಸ್ಯೆಗಳನ್ನು ನಗುವಿನೊಂದಿಗೆ, ಪ್ರೀತಿಯೊಂದಿಗೆ ಎದುರಿಸಲಿದ್ದೇನೆ. ನನಗೆ ನ್ಯಾಯಾಂಗದಲ್ಲಿ ವಿಶ್ವಾಸವಿದೆ. ನಾನು ಗೆಲುವು ಸಾಧಿಸಲಿದ್ದೇನೆ' ಎಂದಿದ್ದಾರೆ ಸಂಜನಾ.

ಹೌದು ನಾನು ಎಂಗೇಜ್ ಆಗಿದ್ದೇನೆ: ಸಂಜನಾ
ಸಂಜನಾ ಜೈಲಿನಲ್ಲಿದ್ದಾಗ ಅವರ ಮದುವೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು. ಕೆಲವು ಚಿತ್ರಗಳು ಸಹ ವೈರಲ್ ಆಗಿದ್ದವು ಅದರ ಬಗ್ಗೆ ಮಾತನಾಡಿರುವ ಸಂಜನಾ, 'ಹೌದು, ನಾನು ಎಂಗೇಜ್ ಆಗಿದ್ದೇನೆ. ಲಾಕ್ಡೌನ್ ಸಮಯದಲ್ಲಿ ಸರಳ ಸಮಾರಂಭದಲ್ಲಿ ಎಂಗೇಜ್ಮೆಂಟ್ ಮುಗಿದಿದೆ. ಈ ವಿಷಯವನ್ನು ನನ್ನ ಬಂಧುಗಳಿಗೆ, ಸ್ನೇಹಿತರಿಗೆ ಸಹ ತಿಳಿಸಲಾಗದ ಹಾಗೆ ಆಗಿಬಿಟ್ಟಿತು' ಎಂದು ನೊಂದುಕೊಂಡಿದ್ದಾರೆ.

ಶೀಘ್ರದಲ್ಲಿಯೇ ಮದುವೆ ಆಗಲಿದ್ದೇನೆ: ಸಂಜನಾ
'ನಾವು ಶೀಘ್ರದಲ್ಲಿಯೇ ಮದುವೆ ಆಗಲಿದ್ದೇವೆ. ನಮ್ಮ ಮದುವೆ ಅದ್ಧೂರಿಯಾಗಿ ಆಗುವುದಿಲ್ಲ ಬದಲಿಗೆ ಯಾವುದಾದರೂ ಚಾರಿಟೇಬಲ್ ಸೊಸೈಟಿಯಲ್ಲಿ ನಡೆಯಲಿದೆ. ಅವಶ್ಯಕತೆ ಇರುವ ಜನರಿಗೆ ಸಹಾಯ ಮಾಡಿ ನಾವು ನಮ್ಮ ಮದುವೆಯನ್ನು ಸಂಭ್ರಮಿಸಲಿದ್ದೇವೆ' ಎಂದಿದ್ದಾರೆ. ಸಂಜನಾ ಅವರು ವೈದ್ಯ ಅಜೀಜ್ ಅವರೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇಸ್ಲಾಂ ಗೆ ಮತಾಂತರವಾಗಿದ್ದು ನನ್ನ ವೈಯಕ್ತಿಕ ಆಯ್ಕೆ: ಸಂಜನಾ
'ನಾನು ಅಧ್ಯಾತ್ಮದ ಕಡೆ ಗಮನವಹಿಸುತ್ತಿದ್ದೇನೆ. ಕೆಲವು ತಿಂಗಳುಗಳಿಂದ ನಮಾಜು ಓದುವುದು ಅಭ್ಯಾಸ ಮಾಡಿಕೊಂಡಿದ್ದೇನೆ. ನಾನು ಕರ್ಮ ಮತ್ತು ದೇವರಲ್ಲಿ ನಂಬಿಕೆ ಇಟ್ಟವಳು, ಎಲ್ಲ ಧರ್ಮಗಳನ್ನು ನಾನು ಸಮಾನವಾಗಿ ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನನ್ನ ವೈಯಕ್ತಿಕ ಆಯ್ಕೆ. ನನ್ನ ಈ ನಿರ್ಧಾರವನ್ನು ರಾಜಕೀಯಗೊಳಿಸುವುದು, ವಿಮರ್ಶೆಗೊಳಪಡಿಸುವುದು ನನಗೆ ಇಷ್ಟವಿಲ್ಲ' ಎಂದಿದ್ದಾರೆ ನಟಿ ಸಂಜನಾ.
ಹಲವು ಸಿನಿಮಾ ಆಫರ್ಗಳು ಸಂಜನಾ ಮುಂದಿವೆ
ನನ್ನ ಕೈಯಲ್ಲಿ ಕನ್ನಡದ ಹಾಗೂ ತಮಿಳಿನ ಕೆಲವು ಆಫರ್ಗಳು ಇವೆ. ಅವುಗಳನ್ನು ಮೊದಲು ಮುಗಿಸಬೇಕಿದೆ. ಅದಾದ ನಂತರ ಹಿಂದಿಯ ಒಂದು ವೆಬ್ ಸರಣಿಯಲ್ಲಿ ನಟಿಸಲಿದ್ದೇನೆ. ಇನ್ನೊಂದು ಹೊಸ ಸಿನಿಮಾದ ಆಫರ್ ಬಂದಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಸಕ್ರಿಯಳಾಗಬೇಕಿದೆ ಎಂದು ಭವಿಷ್ಯದ ಯೋಜನೆಗಳ ಬಗ್ಗೆ ಹೇಳಿದ್ದಾರೆ ಸಂಜನಾ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm