ಬ್ರೇಕಿಂಗ್ ನ್ಯೂಸ್
14-02-21 10:03 pm Prajwal Cinema Correspondent ಸಿನಿಮಾ
ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ.

ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm