ಬ್ರೇಕಿಂಗ್ ನ್ಯೂಸ್
14-02-21 10:03 pm Prajwal Cinema Correspondent ಸಿನಿಮಾ
ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ.

ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am