ಬ್ರೇಕಿಂಗ್ ನ್ಯೂಸ್
14-02-21 10:03 pm Prajwal Cinema Correspondent ಸಿನಿಮಾ
ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ.

ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm