ಬ್ರೇಕಿಂಗ್ ನ್ಯೂಸ್
15-02-21 02:45 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬಂದ ಉಗ್ರಂ ಸಿನಿಮಾಗೆ ಸಂಗೀತ ಸಂಯೋಜನ ಮಾಡುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಸಂಗೀತ ನಿರ್ದೇಶಕ ರವಿ ಬಸ್ರೂರ್ ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಮೂಲಕ ಇಡೀ ದೇಶದ ಗಮನ ಸೆಳೆದಿರುವ ರವಿ ಬಸ್ರೂರ್ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ.
ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಸಂಗೀತ ಸುಧೆ ಹರಿಸುತ್ತಿದ್ದ ರವಿ ಬಸ್ರೂರ್ ಇದೀಗ ಬಾಲಿವುಡ್ ಕಡೆ ಮುಖ ಮಾಡಿದ್ದಾರೆ. ಹೌದು ರವಿ ಬಸ್ರೂರ್ ಮೊದಲ ಬಾರಿಗೆ ಹಿಂದಿ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿರುವ ರವಿ ಅವರ ಮೊದಲ ಹಿಂದಿ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯುಧ್ರಾ ಸಿನಿಮಾಗೆ ರವಿ ಬಸ್ರೂರ್ ಸಂಗೀತ
'ಗಲ್ಲಿ ಬಾಯ್' ಸಿನಿಮಾ ಮೂಲಕ ದೇಶದ ಗಮನ ಸೆಳೆದಿದ್ದ ನಟ ಸಿದ್ಧಾರ್ಥ್ ಚತುರ್ವೇದಿ ಮತ್ತು 'ಮಾಸ್ಟರ್' ಸಿನಿಮಾದ ನಾಯಕಿ ಮಾಳವಿಕಾ ಮೋಹನ್ ನಟನೆಯ 'ಯುಧ್ರಾ' ಸಿನಿಮಾಗೆ ರವಿ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ. ಈ ಮೂಲಕ ಕೆಜಿಎಫ್ ಸಂಗೀತ ನಿರ್ದೇಶಕ ಬಾಲಿವುಡ್ ಪ್ರೇಕ್ಷರನ್ನು ರಂಜಿಸಲು ಮುಂದಾಗಿದ್ದಾರೆ

ಫರಾನ್ ಅಖ್ತಾರ ನಿರ್ಮಾಣ, ರವಿ ಉದಯವರ್ ನಿರ್ದೇಶನ
ಯುಧ್ರಾ ಸಿನಿಮಾ ಬಾಲಿವುಡ್ ನಟ ಫರಾನ್ ಅಖ್ತಾರ್ ಮತ್ತು ರಿತೇಶ್ ಸಿಧ್ವಾನಿ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಚಿತ್ರಕ್ಕೆ ದಿವಂಗತ ನಟಿ ಶ್ರಿದೇವಿ ನಟನೆಯ 'ಮಾಮ್' ಸಿನಿಮಾದ ನಿರ್ದೇಶಕ ರವಿ ಉದಯವರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ಟೀಸರ್ ಮೂಲಕ ಪ್ರೇಕ್ಷಕರ ಮುಂದೆ ಬಂದಿರುವ ಯುಧ್ರಾ ಮುಂದಿನ ವರ್ಷ ತೆರೆಗೆ ಬರುತ್ತಿದೆ.

2021 ಸಮ್ಮರ್ ಗೆ ರಿಲೀಸ್
ಆಕರ್ಷಕವಾಗಿರುವ ಟೀಸರ್ ನಲ್ಲಿ ಸಿದ್ಧಾರ್ಥ್ ಮತ್ತು ಮಾಳವಿಕಾ ಸಿನಿ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿದ್ದಾರೆ. ಬಹು ನಿರೀಕ್ಷೆಯ ಸಿನಿಮಾ ಮುಂದಿನ ವರ್ಷ ಬೇಸಿಗೆಯಲ್ಲಿ ರಿಲೀಸ್ ಆಗುತ್ತಿದೆ. ಬಾಲಿವುಡ್ ಸಿನಿಮಾವಾದರೂ ರವಿ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿರುವುದರಿಂದ ಕನ್ನಡಿಗರು ವಿಶೇಷವಾಗಿದೆ. ಕೆಜಿಎಫ್ ಸಂಗೀತ ಮಾಂತ್ರಿಕನ ಮೊದಲ ಹಿಂದಿ ಸಿನಿಮಾದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲ ಕನ್ನಡಿಗರಲ್ಲಿ ಹೆಚ್ಚಾಗಿದೆ.

ಪೋಸ್ಟರ್ ನಲ್ಲಿ ಇಲ್ಲ ರವಿ ಬಸ್ರೂರ್ ಹೆಸರು
ಅಂದಹಾಗೆ ರವಿ ಬಸ್ರೂರ್ ಅವರ ಮೊದಲ ಹಿಂದಿ ಸಿನಿಮಾದ ಪೋಸ್ಟರ್ ನಲ್ಲಿ ಅವರ ಹೆಸರೇ ಇಲ್ಲ. ಕೆಜಿಎಫ್ ಮೂಲಕ ದೇಶದ ಗಮನ ಸೆಳೆದಿರುವ ಸಂಗೀತ ನಿರ್ದೇಶಕನ ಹೆಸರು ಪೋಸ್ಟರ್ ನಲ್ಲಿ ಮಿಸ್ ಆಗಿರುವುದಕ್ಕೆ ಕನ್ನಡ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೂ ನಿಮ್ಮ ಉತ್ತಮ ಕೆಲಸ, ನಿಮ್ಮ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಲಿದೆ ಎಂದು ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.
ಸಲಾರ್ ಸಿನಿಮಾಗೆ ಸಂಗೀತ ನಿರ್ದೇಶನ
ರವಿ ಬಸ್ರೂರ್ ಸದ್ಯ ಬಹು ನಿರೀಕ್ಷೆಯ ಸಲಾರ್ ಸಿನಿಮಾದ ಸಂಗೀತ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನಲ್ಲಿ ಬರುತ್ತಿರುವ ಇಂಡಿಯನ್ ಸಿನಿಮಾ ಸಲಾರ್ ಗೆ ರವಿ ಬಸ್ರೂರ್ ಎಂಟ್ರಿ ಕೊಟ್ಟಿದ್ದಾರೆ. ರವಿ ಬಸ್ರೂರ್ ಈಗಾಗಲೇ ಕನ್ನಡದ ಜೊತೆಗೆ ತುಳು, ತಮಿಳು ಮತ್ತು ಮಲಯಾಳಂ ಸಿನಿಮಾಗಳಿಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದೀಗ ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am