ಬ್ರೇಕಿಂಗ್ ನ್ಯೂಸ್
16-02-21 09:53 am Source: FILMIBEAT Manjunatha C ಸಿನಿಮಾ
ರಿಹಾನಾ ಟ್ವೀಟ್ನ ನಂತರ ಸಚಿನ್ ತೆಂಡೂಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಹಲವು ನಟ-ನಟಿಯರು ಮಾಡಿದ ಸರಣಿ ಟ್ವೀಟ್ಗಳ ಬಗ್ಗೆ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ ಮಾಡಿದೆ, ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲತಾ ಮಂಗೇಶ್ಕರ್ ಹಾಗೂ ಸಚಿನ್ ತೆಂಡೂಲ್ಕರ್ ಅವರನ್ನು ವಿಚಾರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್ಮುಖ್, 'ಸೆಲೆಬ್ರಿಟಿಗಳ ಟ್ವೀಟ್ ಬಗೆಗಿನ ನನ್ನ ಹೇಳಿಕೆಯನ್ನು ತಿರುಚಿ ಪ್ರಕಟಿಸಲಾಗಿದೆ. ಲತಾ ಮಂಗೇಶ್ಕರ್ ಅವರು ನಮಗೆ ದೇವರ ಸಮಾನ, ಸಚಿನ್ ಅವರನ್ನು ದೇಶವೇ ಗೌರವಿಸುತ್ತದೆ, ಅವರನ್ನು ವಿಚಾರಣೆಗೆ ಒಳಪಡಿಸುವುದಿಲ್ಲ' ಎಂದಿದ್ದಾರೆ.
'ನನ್ನ ಹೇಳಿಕೆಯನ್ನು ತಪ್ಪಾಗಿ ಪ್ರೆಸೆಂಟ್ ಮಾಡಲಾಗಿದ್ದು, ಸೆಲೆಬ್ರಿಟಿಗಳ ವಿಚಾರಣೆ ನಡೆಯಲಿದೆ ಎಂದು ನಾನು ಹೇಳಿಲ್ಲ, ಪ್ರಕರಣದ ಬಗ್ಗೆ ಬಿಜೆಪಿ ಐಟಿ ಸೆಲ್ ನ ತನಿಖೆ ಆಗಲಿದೆ' ಎಂದಿದ್ದಾರೆ ಅನಿಲ್ ದೇಶ್ಮುಖ್.
'ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್ನ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ. ಟ್ವೀಟ್ ಮಾಡಿದ ಸೆಲೆಬ್ರಿಟಿಗಳಿಗೆ ಬಿಜೆಪಿ ಐಟಿ ಸೆಲ್ನಿಂದ ಒತ್ತಡ ಹಾಕಲಾಗಿತ್ತೆ, ಟ್ವೀಟ್ನ 'ಸ್ಕ್ರಿಪ್ಟ್' ಅನ್ನು ನೀಡಲಾಗಿತ್ತೆ ಎಂಬುದನ್ನು ತನಿಖೆ ಮಾಡಲಾಗುತ್ತದೆ' ಎಂದಿದ್ದಾರೆ ಅನಿಲ್. ಈ ವರೆಗಿನ ತನಿಖೆಯ ಪ್ರಕಾರ ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥ ಹಾಗೂ ಇನ್ನೂ 12 ಮಂದಿಯ ಹೆಸರು ಕೇಳಿ ಬಂದಿದೆ, ತನಿಖೆ ಜಾರಿಯಲ್ಲಿದೆ ಎಂದು ಗೃಹ ಸಚಿವ ಅನಿಲ್ ಮಾಹಿತಿ ನೀಡಿದ್ದಾರೆ.
ರೈತ ಪ್ರತಿಭಟನೆ ಬಗ್ಗೆ ಅಂತರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ ಟ್ವೀಟ್ ಮಾಡಿದ ಬಳಿಕ, ಭಾರತದ ಸಿನಿಮಾ ಹಾಗೂ ಕ್ರೀಡಾ ಸೆಲೆಬ್ರಿಟಿಗಳು ರಿಹಾನಾ ಟ್ವೀಟ್ ವಿರುದ್ಧವಾಗಿ ಸರಣಿ ಟ್ವೀಟ್ ಮಾಡಿದರು. ಅಕ್ಷಯ್ ಕುಮಾರ್,ಅಜಯ್ ದೇವಗನ್, ಸುನಿಲ್ ಶೆಟ್ಟಿ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಅನಿಲ್ ಕುಂಬ್ಳೆ ಇನ್ನೂ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm