ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm