ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am