ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm