ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm