ಬ್ರೇಕಿಂಗ್ ನ್ಯೂಸ್
21-02-21 12:19 pm Source: FILMIBEAT Shruthi Gk ಸಿನಿಮಾ
13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 24 ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಾರಿ 'ಭಾರತೀಯ ಪ್ರದರ್ಶನ ಕಲೆಗಳ ಮಹತ್ವ' ವಿಷಯದ ಮೇಲೆ ಚಿತ್ರೋತ್ಸವ ನಡೆಯಲಿದೆ.
ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಸಾಧ್ಯತೆಗಳಿದ್ದು, ಇದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಾರಿಯ ಚಿತ್ರೋತ್ಸವ ಕೋವಿಡ್ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳಿಗನುಸಾರವಾಗಿ ನಡೆಯಬೇಕೆಂದು ಸಿಎಂ ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಸಭೆಯ ಬಳಿಕ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್ ಕ್ಲಾಸಿಕ್, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್ಪ್ಯಾಕ್, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿವರಿಸಿದರು.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm