ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm