ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm