ಬ್ರೇಕಿಂಗ್ ನ್ಯೂಸ್
24-02-21 12:22 pm Source: FILMIBEAT ಸಿನಿಮಾ
ಕೆಜಿಎಫ್ ಚಾಪ್ಟರ್ 2 ಚಿತ್ರದ ಮೇಲೆ ಭಾರತೀಯ ಚಿತ್ರರಂಗ ಕಣ್ಣಿಟ್ಟಿದೆ. ಕನ್ನಡದಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸೀಕ್ವೆಲ್ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಜುಲೈ 16 ರಂದು ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಈಗಾಗಲೇ ಭಾರಿ ಮೊತ್ತಕ್ಕೆ ಹಿಂದಿ ವಿತರಣೆ ಹಕ್ಕು ಮಾರಾಟ ಆಗಿದೆ.
ಈ ಕಡೆ ಸೌತ್ ಇಂಡಿಯಾದಲ್ಲಿ ಕೆಜಿಎಫ್ ಹವಾ ಹೆಚ್ಚಿದ್ದು, ತೆಲುಗು ವರ್ಷನ್ ವಿತರಣೆ ಹಕ್ಕು ದಾಖಲೆ ಬೆಲೆಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಚಾಪ್ಟರ್ 1 ಸಿನಿಮಾ ರಿಲೀಸ್ ಮಾಡಿದ್ದ ವಿತರಕ ಈ ಸಲ ಹಿಂದೆ ಸರಿದಿದ್ದು, ಮತ್ತೊಬ್ಬ ಸ್ಟಾರ್ ನಿರ್ಮಾಪಕ ಕೆಜಿಎಫ್ ಹಕ್ಕು ಖರೀದಿಸಿದ್ದಾರೆ. ಹಾಗಾದ್ರೆ, ಕೆಜಿಎಫ್ ಚಿತ್ರದ ತೆಲುಗು ವಿತರಣೆ ಹಕ್ಕಿಗೆ ನೀಡಿದ ಹಣವೆಷ್ಟು? ಮುಂದೆ ಓದಿ...
ವರಾಹಿ ಬದಲು ದಿಲ್ ರಾಜು?
ಕೆಜಿಎಫ್ ಚಾಪ್ಟರ್ 1 ಚಿತ್ರವನ್ನು ತೆಲುಗು ಭಾಷೆಯಲ್ಲಿ ವರಾಹಿ ಸಂಸ್ಥೆ ಬಿಡುಗಡೆ ಮಾಡಿತ್ತು. ಇದೀಗ, ಚಾಪ್ಟರ್ 2ರಿಂದ ವರಾಹಿ ಸಂಸ್ಥೆ ಹಿಂದೆ ಸರಿದಿದೆ. ಕೆಜಿಎಫ್ ಚಿತ್ರತಂಡ ಹೆಚ್ಚು ಹಣ ಬೇಡಿಕೆಯಿಟ್ಟ ಕಾರಣ ವಿತರಣೆಯಿಂದ ಹಿಂದೆ ಹೆಜ್ಜೆಯಿಟ್ಟಿದೆ ಎಂಬ ಸುದ್ದಿ ಹೊರಬಿದ್ದಿದೆ. ಇದೀಗ, ಚಾಪ್ಟರ್ 2 ಚಿತ್ರವನ್ನು ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ರಿಲೀಸ್ ಮಾಡಲಿದ್ದಾರೆ.

ಭಾರಿ ಮೊತ್ತಕ್ಕೆ ಕೆಜಿಎಫ್ ತೆಲುಗು ಹಕ್ಕು?
ಸಾಕ್ಷಿ ವೆಬ್ಸೈಟ್ ವರದಿ ಮಾಡಿರುವಂತೆ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ದಿಲ್ ರಾಜು ಅವರು ವಿತರಣೆ ಮಾಡಲಿದ್ದಾರೆ. ಸದ್ಯದ ವರದಿ ಪ್ರಕಾರ ಸುಮಾರು 65 ಕೋಟಿ ಹಣ ನೀಡಿ ಕೆಜಿಎಫ್ ಚಾಪ್ಟರ್ 2 ಹಕ್ಕು ಖರೀದಿಸಿದ್ದಾರೆ ಎಂದು ಹೇಳಲಾಗಿದೆ.
5 ಕೋಟಿಗೆ ಸೇಲ್ ಆಗಿತ್ತು ಚಾಪ್ಟರ್ 1?
ಅಂದ್ಹಾಗೆ, ಕೆಜಿಎಫ್ ಚಾಪ್ಟರ್ 1 ಸಿನಿಮಾದ ತೆಲುಗು ವಿತರಣೆ ಹಕ್ಕು ಕೇವಲ 5 ಕೋಟಿಗೆ ಮಾರಾಟವಾಗಿತ್ತು. ತೆಲುಗು ವರ್ಷನ್ನಿಂದ ಸುಮಾರು 20 ಕೋಟಿ ಗಳಿಕೆ ಕಂಡಿತ್ತು ಎಂಬ ವರದಿ ಇದೆ. ಆದ್ರೀಗ, ಕೆಜಿಎಫ್ ಮೇಲಿನ ನಿರೀಕ್ಷೆ ಹೆಚ್ಚಾಗಿರುವುದರಿಂದ ಚಿತ್ರತಂಡ ಬೇಡಿಕೆ ಹೆಚ್ಚಿಸಿದೆ.

ಜುಲೈ 16ಕ್ಕೆ ಕೆಜಿಎಫ್
ಈ ಕಡೆ ತಮಿಳು ಭಾಷೆಯಲ್ಲೂ ಕೆಜಿಎಫ್ ಚಿತ್ರಕ್ಕೆ ಭಾರಿ ಕ್ರೇಜ್ ಇದ್ದು, ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟವಾಗಿದೆಯಂತೆ. ಆದರೆ, ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಇನ್ನುಳಿದಂತೆ ಜುಲೈ 16 ರಂದು ಸಿನಿಮಾ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm