ಬ್ರೇಕಿಂಗ್ ನ್ಯೂಸ್
24-02-21 12:37 pm Source: FILMIBEAT ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ವಿಚಾರದಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಹಿಂದೆ ಖ್ಯಾತ ಉದ್ಯಮಿಯೊಬ್ಬರ ಜೊತೆ ವೈವಾಹಿಕ ಬದುಕು ಆರಂಭಿಸಲು ತಯಾರಾಗಿದ್ದಾರೆ ಎಂದು ಸುದ್ದಿ ವರದಿಯಾಗಿತ್ತು. ನಂತರ ಆ ಸುದ್ದಿಯನ್ನು ನಟಿ ನಿರಾಕರಿಸಿದ್ದರು. ಇದೀಗ, ತಮಿಳಿನ ಖ್ಯಾತ ಸಂಗೀತ ನಿರ್ದೇಶಕನ ಜೊತೆ ಕೀರ್ತಿ ಸುರೇಶ್ ಪ್ರೀತಿಯಲ್ಲಿದ್ದಾರೆ ಎಂಬ ವಿಷಯ ಸದ್ದು ಮಾಡ್ತಿದೆ. ಈ ಕುರಿತು ತಮಿಳು ಫಿಲ್ಮಿಬೀಟ್ ವರದಿ ಮಾಡಿದ್ದು, ಈ ವರ್ಷದಲ್ಲೇ ಕೀರ್ತಿ ಮದುವೆ ಸಹ ಆಗಲಿದ್ದಾರೆ ಎಂದು ಹೇಳಿದೆ. ಕೀರ್ತಿ ಸುರೇಶ್ ಮತ್ತು ಸಂಗೀತ ನಿರ್ದೇಶಕನ ಪ್ರೀತಿ ವಿಚಾರ ಈಗ ತಮಿಳು ಹಾಗೂ ತೆಲುಗು ಇಂಡಸ್ಟ್ರಿಯಲ್ಲಿ ಟಾಕ್ ಆಫ್ ದಿ ಟೌನ್ ಆಗಿದೆ. ಮುಂದೆ ಓದಿ....

ಅನಿರುದ್ಧ್ ಲವ್ಸ್ ಕೀರ್ತಿ ಸುರೇಶ್?
ತಮಿಳು ಇಂಡಸ್ಟ್ರಿಯಲ್ಲಿ ಸದ್ಯ ಸಂಚಲನ ಸೃಷ್ಟಿಸಿರುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಜೊತೆ ಕೀರ್ತಿ ಸುರೇಶ್ ಪ್ರೀತಿಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ವರ್ಷದ ಅಂತ್ಯದಲ್ಲಿ ದಾಂಪತ್ಯ ಜೀವನ ಆರಂಭಿಸಲು ಯೋಜಿಸಿದ್ದಾರೆ ಎನ್ನಲಾಗುತ್ತಿದೆ.

ಗಾಯಕಿ ಜೊತೆ ಅನಿರುದ್ಧ್ ಹೆಸರು?
ಈ ಹಿಂದೆ ಅನಿರುದ್ಧ್ ರವಿಚಂದ್ರನ್ ಹೆಸರು ಗಾಯಕಿ ಜೊನಿತಾ ಗಾಂಧಿ ಜೊತೆ ತಳುಕು ಹಾಕಿಕೊಂಡಿತ್ತು. ಅನಿರುದ್ಧ್ ಮತ್ತು ಜೊನಿತಾ ಡೇಟ್ ಮಾಡಿದ್ದರು. ಇಬ್ಬರು ವಿವಾಹ ಸಹ ಆಗಲಿದ್ದಾರೆ ಎನ್ನುವಷ್ಟು ಆತ್ಮೀಯತೆ ಇರುವುದಾಗಿ ಹೇಳಲಾಗಿತ್ತು. ಆದರೆ, ಈ ಜೋಡಿ ಅಧಿಕೃತವಾಗಿ ತಮ್ಮ ಪ್ರೀತಿ ಬಗ್ಗೆ ಹೇಳಲೇ ಇಲ್ಲ.

ಬರ್ತಡೇ ಫೋಟೋಗಳು ವೈರಲ್ ಆಗಿದ್ದವು
ಅನಿರುದ್ಧ್ ರವಿಚಂದ್ರನ್ ಬರ್ತಡೇಯಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದರು. ಅನಿರುದ್ಧ್ ಮತ್ತು ಕೀರ್ತಿ ಒಟ್ಟಿಗೆ ಹುಟ್ಟುಹಬ್ಬ ಸೆಲೆಬ್ರೆಟ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಫೋಟೋಗಳ ಹಿನ್ನೆಲೆ ಆಗಲೇ ಕೀರ್ತಿ ಸುರೇಶ್ ಮತ್ತು ಅನಿರುದ್ಧ್ ಸಂಬಂಧದ ಬಗ್ಗೆ ಚರ್ಚೆಗಳು ಆಗಿತ್ತು.

ಇಬ್ಬರದ್ದು ಬ್ಯುಸಿ ಜೀವನ
ಕೀರ್ತಿ ಸುರೇಶ್ ಸತತ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್ ಜೊತೆ ಅಣ್ಣಾತ್ತೆ, ಮಹೇಶ್ ಬಾಬು ಜೊತೆ ಸರ್ಕಾರು ವಾರಿ ಪಾಟ, ತೆಲುಗಿನ ರಂಗ್ ದೇ, ಗುಡ್ ಲಕ್ ಸಖಿ ಸೇರಿದಂತೆ ತಮಿಳು ಹಾಗೂ ಮಲಯಾಳಂ ಭಾಷೆಯ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಕಡೆ ಮಾಸ್ಟರ್ ಸಕ್ಸಸ್ ಬಳಿಕ ಅನಿರುದ್ಧ್ ಶಿವಕಾರ್ತಿಕೇಯನ್ ನಟನೆಯ ಡಾಕ್ಟರ್, ವಿಜಯ್ 65ನೇ ಚಿತ್ರ, ವಿಘ್ನೇಶ್ ಶಿವನ್ ನಿರ್ದೇಶನದ ಚಿತ್ರಗಳು ಸೇರಿದಂತೆ ಹಲವು ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm