ಬ್ರೇಕಿಂಗ್ ನ್ಯೂಸ್
25-02-21 10:48 am Source: FILMIBEAT ಸಿನಿಮಾ
ದಕ್ಷಿಣ ಭಾರತ ಸಿನಿಮಾ ಉದ್ಯಮದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳಲ್ಲಿ ಒಬ್ಬರು ನಟ ವಿಜಯ್ ದೇವರಕೊಂಡ.
ಸಿನಿಮಾಗಳಲ್ಲಿ ತಮ್ಮ ಪ್ಲೇಬಾಯ್ ಲುಕ್ನಿಂದ ಯುವತಿಯರನ್ನು ಸೆಳೆಯುವ ವಿಜಯ್ ದೇವರಕೊಂಡ ಲಕ್ಷಾಂತರ ಮಹಿಳಾ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂತಿಪ್ಪ ವಿಜಯ್ ದೇವರಕೊಂಡ ಜೊತೆಗೆ ಹಲವು ನಟಿಯರ ಹೆಸರುಗಳು ಸಹ ಆಗಾಗ್ಗೆ ಥಳಕು ಹಾಕಿಕೊಳ್ಳುತ್ತಿರುತ್ತದೆ.
ಇದೀಗ ವಿಜಯ್ ದೇವರಕೊಂಡ ಜೊತೆಗೆ ಬಾಲಿವುಡ್ ನಟಿಯ ಹೆಸರು ಸೇರಿಕೊಂಡಿದೆ. ಅದೂ ಈ ಯುವ ನಟಿ ಸಾಮಾನ್ಯದ ನಟಿಯಲ್ಲ. ದೊಡ್ಡ ನವಾಬ ಕುಟುಂಬಕ್ಕೆ ಸೇರಿದ ಯುವತಿ. ಅದುವೇ ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್.
ವಿಜಯ್ ದೇವರಕೊಂಡ-ಸಾರಾ ಅಲಿ ಖಾನ್ ಡೇಟಿಂಗ್?
ನಟ ವಿಜಯ್ ದೇವರಕೊಂಡ ಹಾಗೂ ಸಾರಾ ಅಲಿ ಖಾಣ್ ಡೇಟಿಂಗ್ನಲ್ಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಹೀಗೆ ಸುದ್ದಿ ಹರಿದಾಡಲು ಕಾರಣವೂ ಇದೆ. ಇಬ್ಬರೂ ಇತ್ತೀಚೆಗೆ ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾರಾ, ವಿಜಯ್ ದೇವರಕೊಂಡ ಜೊತೆಗೆ ಆಪ್ತವಾಗಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಸಹ.

ಮನಿಷ್ ಮಲ್ಹೋತ್ರಾ ಮನೆಯಲ್ಲಿ ಪಾರ್ಟಿ
ಖ್ಯಾತ ಡಿಸೈನರ್ ಮನಿಷ್ ಮಲ್ಹೋತ್ರಾ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಇದೇ ಪಾರ್ಟಿಯಲ್ಲಿ ಕರಣ್ ಜೋಹರ್, ಸಾರಾ ಅಲಿ ಖಾನ್, ಪುರಿ ಜಗನ್ನಾಥ್, ಚಾರ್ಮಿ, ಅನನ್ಯಾ ಪಾಂಡೆ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ಇದ್ದರು. ವಿಜಯ್ ದೇವರಕೊಂಡ ಜೊತೆ ಚಿತ್ರ ಪ್ರಕಟಿಸಿರುವ ಸಾರಾ ಅಲಿ ಖಾನ್, 'ಫ್ಯಾನ್ ಮೂಮೆಂಟ್' ಎಂಬ ಕ್ಯಾಪ್ಷನ್ ಹಾಕಿದ್ದಾರೆ.
ರಶ್ಮಿಕಾ ಮಂದಣ್ಣ ಜೊತೆಗೆ ಹೆಸರು ಕೇಳಿಬಂದಿತ್ತು
ವಿಜಯ್ ದೇವರಕೊಂಡ ಹೆಸರು ಈ ಮೊದಲು ಕನ್ನಡತಿ ನಟಿ ರಶ್ಮಿಕಾ ಮಂದಣ್ಣ ಜೊತೆಗೂ ಕೇಳಿ ಬಂದಿತ್ತು. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಇಬ್ಬರೂ ಆಪ್ತ ಗೆಳೆಯರಾಗಿಯೂ ಇದ್ದರು, ಹಾಗಾಗಿ ಇಬ್ಬರ ಹೆಸರನ್ನು ಥಳುಕು ಹಾಕಲಾಗಿತ್ತು.

ಬೆಲ್ಜಿಯಂ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಜಯ್
ವಿಜಯ್ ದೇವರಕೊಂಡ ತಮ್ಮ ಗರ್ಲ್ಫ್ರೆಂಡ್ನ ಪರಿಚಯವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದರು. ವಿಜಯ್ ದೇವರಕೊಂಡ ಬೆಲ್ಜಿಯಂ ಹುಡುಗಿ ವಿರ್ಜಿನಿಯಾ ಎಂಬಾಕೆಯೊಂದಿಗೆ ಪ್ರೇಮದಲ್ಲಿರುವುದಾಗಿ ಮೂರು ವರ್ಷಗಳ ಹಿಂದೆ ಹೇಳಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ವಿರ್ಜೀನಿಯಾ ಜೊತೆಗೆ ಯಾವುದೇ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಲ್ಲ ವಿಜಯ್.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm