ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.

ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm