ಬ್ರೇಕಿಂಗ್ ನ್ಯೂಸ್
27-02-21 11:09 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್, ಶ್ರೀಮುರಳಿ, ವಿಷ್ಣುವರ್ಧನ್ ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಮಾನ್ಯಾ ಪಾರ್ಶ್ವವಾಯುಯಿಂದ ಬಳಲುತ್ತಿದ್ದಾರೆ. ಶಾಸ್ತ್ರಿ ಸಿನಿಮಾ ಮೂಲಕ ಕನ್ನಡಿಗರ ಮನೆಗೆದ್ದಿದ್ದ ನಟಿ ಮಾನ್ಯಾ, ಸಿನಿಮಾರಂಗದಿಂದ ದೂರ ಸರಿದು ಅನೇಕ ವರ್ಷಗಳಾಗಿದೆ. ಸದ್ಯ ಅಮೆರಿಕಾದಲ್ಲಿ ವಾಸಿಸುತ್ತಿರುವ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾದ ಬಗ್ಗೆ ನಟಿ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನಗೆ ಕುಳಿತುಕೊಳ್ಳಲು, ಮಲಗಲು, ನಡೆಯಲು ಆಗುತ್ತಿಲ್ಲ ಎಂದು ತನ್ನ ಕಷ್ಟವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮತ್ತೆ ಮಾಮೂಲಿ ಸ್ಥಿತಿಗೆ ಬರುತ್ತೇನೆ, ಮತ್ತೆ ಡಾನ್ಸ್ ಮಾಡುತ್ತೇನೆ ಎನ್ನುವ ಬರವಸೆ ನೀಡಿದ್ದಾರೆ. ತನ್ನ ನೋವಿನ ಬಗ್ಗೆ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ. ಮುಂದೆ ಓದಿ..

ಎಡ ಕಾಲು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ
'ಮೂರು ವಾರಗಳ ಹಿಂದೆ ನಾನು ಗಾಯಗೊಂಡಿದ್ದೆ. ಬಳಿಕ ನನ್ನ ಎಡಭಾಗ ಪಾರ್ಶ್ವವಾಯುಗೆ ಸುತ್ತಾಯಿತು. ನನ್ನ ಎಡಗಾಲು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ನಾನು ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯಬೇಕಾಯಿತು.

ಕುಳಿತುಕೊಳ್ಳಲು, ಮಲಗಲು ಆಗುತ್ತಿಲ್ಲ
'ನನ್ನ ಬೆನ್ನಿಗೆ ಸ್ಟೀರಾಯ್ಡ್ ಚುಚ್ಚುಮದ್ದು ನೀಡಲಾಗಿದೆ. ಕೋವಿಡ್ ಕಾರಣದಿಂದ ಯಾರಿಗೂ ಪ್ರವೇಶ ನೀಡುತ್ತಿಲ್ಲ. ನಾನು ಒಬ್ಬೊಂಟಿಯಾಗಿದ್ದೀನಿ. ನಾನು ಬೇಗನೆ ಗುಣಮುಖಳಾಗುತ್ತೇನೆ ಎಂದು ಭಾವಿಸುದ್ದೇನೆ. ಮೂರು ವಾರಗಳಿಂದ ನನಗೆ ಕುಳಿತುಕೊಳ್ಳಲು, ನಡೆಯಲು, ಮಲಗಲು ಆಗುತ್ತಿಲ್ಲ. ಆದರೆ ಮತ್ತೆ ನಾನು ಮೊದಲಿನ ಸ್ಥಿತಿಗೆ ಬರಲು ಪ್ರಯತ್ನಿಸುತ್ತಿದೀನಿ.'

ಮಾಮೂಲಿ ಸ್ಥಿತಿಗೆ ಬರುತ್ತೇನೆ ಎಂದ ಮಾನ್ಯಾ
'ನಾನು ಮತ್ತೆ ಡಾನ್ಸ್ ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದೆ. ಆದರೆ ವೈದ್ಯರು ನಿಧಾನವಾಗಿ ಚೇತರಿಸಿಕೊಂಡ ಬಳಿಕ ಮತ್ತೆ ಡಾನ್ಸ್ ಮಾಡಬಹುದು ಎಂದು ಹೇಳಿದ್ದಾರೆ. ನಾನು ನಿಧಾನವಾಗಿ ಗುಣಮುಖಳಾಗುತ್ತಿದ್ದೀನಿ ಇದಕ್ಕೆ ದೇವರಿಗೆ ಧನ್ಯವಾದ ತಿಳಿಸುತ್ತೇನೆ' ಎಂದು ದೀರ್ಘವಾಗಿ ಬರೆದುಕೊಂಡಿದ್ದಾರೆ.

ಮತ್ತೆ ಡಾನ್ಸ್ ಮಾಡುತ್ತೇನೆ-ಮಾನ್ಯಾ
'ನಿಮ್ಮನ್ನು ನೀವು ಯಾವತ್ತು ಬಿಟ್ಟುಕೊಡಬೇಡಿ. ಪ್ರತಿಯೊಂದು ಚಿಕ್ಕ ವಿಚಾರಕ್ಕೂ ಹೋರಾಟ ಮಾಡಿ. ನಿಮ್ಮನ್ನು ಬಲಪಡಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಆ ಸಮಯದಲ್ಲಿ ನಾನು ತುಂಬಾ ನೊಂದಿದ್ದೆ. ತುಂಬಾ ಅತ್ತಿದ್ದೇನೆ. ಆದರೆ ಗೆದ್ದು ಬರುತ್ತೇನೆ. ಮತ್ತೆ ನಾನು ಡಾನ್ಸ್ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm