ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್ಗೆ ಕನ್ನಡದಲ್ಲಿ ಸ್ಟಾರ್ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm