ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am