ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm