ಬ್ರೇಕಿಂಗ್ ನ್ಯೂಸ್
04-03-21 11:41 am Source: FILMIBEAT ಸಿನಿಮಾ
ಬಿಗ್ಬಾಸ್ ಮನೆ ದಿನದಿಂದ ದಿನಕ್ಕೆ ಬಿಸಿ ಏರುತ್ತಿದೆ. ಮೊದಲ ಎರಡು ದಿನ ಹಾಸ್ಯ-ನಗು ತುಂಬಿಕೊಂಡಿದ್ದ ಮನೆಯಲ್ಲಿ ಸಣ್ಣದಾಗಿ ಮನಸ್ತಾಪ, ಕೋಪ, ದೂರು, ಜಗಳಗಳು ಏಳುತ್ತಿವೆ.
ನಿನ್ನೆಯ (ಬುಧವಾರ) ಎಪಿಸೋಡ್ನಲ್ಲಿ ಪ್ರಶಾಂತ್ ಸಂಬರ್ಗಿ ಹಾಗೂ ಬ್ರೋ ಗೌಡನ ನಡುವೆ ಈಗಾಗಲೇ ಜಗಳವಾಗಿದ್ದನ್ನು ಪ್ರೇಕ್ಷಕರು ನೋಡಿದ್ದಾರೆ. ಗುರುವಾರದ ರಾತ್ರಿಯ ಎಪಿಸೋಡ್ನಲ್ಲಿ ಇನ್ನೂ ಭಾರಿ ದೊಡ್ಡ ಜಗಳವೇ ನಡೆಯಲಿದೆ.
ಹೌದು, ಇಬ್ಬರು ಮಹಿಳಾ ಸ್ಪರ್ಧಿಗಳು ಪರಸ್ಪರ ಕುಸ್ತಿಗೆ ಬಿದ್ದಿದ್ದಾರೆ ಆದರೆ ಇದು ಯಾವುದೇ ಜಗಳ ಕಾರಣಕ್ಕೆ ಅಲ್ಲ ಬದಲಿಗೆ ಟಾಸ್ಕ್ನ ಕಾರಣಕ್ಕೆ. ಇಬ್ಬರು ಮಹಿಳಾ ಸ್ಪರ್ಧಿಗಳು ಪರಸ್ಪರ ಕಿತ್ತಾಡುತ್ತಿರುವ ಪ್ರೋಮೊ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಕುತೂಹಲ ದುಪ್ಪಟ್ಟಾಗಿದೆ.
ಕಿತ್ತಾಡಿದ ಧನುಶ್ರಿ-ದಿವ್ಯಾ ಸುರೇಶ್
ಸ್ಪರ್ಧಿಗಳಾದ ದಿವ್ಯಾ ಸುರೇಶ್ ಹಾಗೂ ಟಿಕ್ಟಾಕ್ ಸ್ಟಾರ್ ಧನುಶ್ರಿ ಅವರು ಟಾಸ್ಕ್ನಲ್ಲಿ ಗೆಲ್ಲಲು ಆಟವೊಂದನ್ನು ಆಡುತ್ತಿದ್ದು, ಆಟದಲ್ಲಿ ಪರಸ್ಪರ ಕಿತ್ತಾಡುತ್ತಿದ್ದಾರೆ. ಈ ಕಿತ್ತಾಟ ಬಹು ತೀವ್ರವಾಗಿಯೇ ಇದೆ. ಇಬ್ಬರೂ ಸ್ಪರ್ಧಿಗಳು ಒಬ್ಬರನ್ನೊಬ್ಬರು ಎಳೆದಾಡಿ-ತಳ್ಳಾಡಿ ಹಿಡಿದು ಬೀಳಿಸಿ ಆಟದಲ್ಲಿ ಗೆಲ್ಲುವ ಪ್ರಯತ್ನ
ಬಿಗ್ಬಾಸ್ ಕೊಟ್ಟಿದ್ದಾರೆ ಅವಕಾಶ
ಧನುಶ್ರಿ ಈಗಾಗಲೇ ನಾಮಿನೇಟ್ ಆಗಿದ್ದು, ಗೀತಾ ಭಟ್ ಅವರ ಮೇಲೆ ಆಟದಲ್ಲಿ ಸೋತು ಸೇಫ್ ಜೋನ್ಗೆ ಹೋಗಲು ಇದ್ದ ಒಂದು ಅವಕಾಶವನ್ನು ಕಳೆದುಕೊಂಡಿದ್ದಾರೆ. ಆದರೆ ಬಿಗ್ಬಾಸ್ ಕೊಟ್ಟಿರುವ ಮತ್ತೊಂದು ಅವಕಾಶದಲ್ಲಿ ದಿವ್ಯಾ ಸುರೇಶ್ ಎದುರು ಆಡಿದ್ದಾರೆ ಧನುಶ್ರಿ.
ಚೆಂಡಿಗಾಗಿ ಧನುಶ್ರಿ-ದಿವ್ಯಾ ಸುರೇಶ್ ಕಿತ್ತಾಟ
ಕೋರ್ಟ್ನ ಮಧ್ಯದಲ್ಲಿರುವ ಚೆಂಡನ್ನು ಇಬ್ಬರು ಸ್ಪರ್ಧಿಗಳು ಬೇಗನೇ ಎತ್ತಿಕೊಂಡು ಎದುರಾಳಿ ಅಂಗಳದಲ್ಲಿರುವ ಬಾಸ್ಕೆಟ್ಗೆ ಹಾಕುವ ಟಾಸ್ಕ್ ಅನ್ನು ಬಿಗ್ಬಾಸ್ ನೀಡಿದ್ದಾರೆ. ಬಾಸ್ಕೆಟ್ ಬಾಲ್ ಆಟದ ಮಾದರಿಯಲ್ಲಿಯೇ ಈರುವ ಆಟವನ್ನು ಧನುಶ್ರಿ ಹಾಗೂ ದಿವ್ಯಾ ಇಬ್ಬರೂ ಬಹಳ ಬಲಪ್ರಯೋಗಿಸಿ ಆಡುತ್ತಿರುವುದು ಪ್ರೋಮೋ ನಲ್ಲಿ ಗೊತ್ತಾಗುತ್ತಿದೆ.

ಗಾಯಗೊಂಡ ದಿವ್ಯಾ ಸುರೇಶ್
ಪ್ರೊಮೋದಲ್ಲಿ ಕಾಣುತ್ತಿರುವಂತೆ ಈ ಆಟದಲ್ಲಿ ದಿವ್ಯಾಗೆ ದೊಡ್ಡ ಪೆಟ್ಟೇ ಆಗಿದೆ. ದಿವ್ಯಾ ಅವರ ಕಾಲಿಗೆ ಏಟಾಗಿ ರಕ್ತ ಹರಿದಿದೆ. ಮನೆಯ ಇತರ ಸ್ಪರ್ಧಿಗಳು ದಿವ್ಯಾ ಅವರ ಶುಶ್ರೂಶೆಯಲ್ಲಿ ತೊಡಗಿದ್ದಾರೆ. ಆಟದ ಅಂತ್ಯದ ಫಲಿತಾಂಶ ಏನಾಯಿತು. ಧನುಶ್ರಿ ಸೇಫ್ ಆದರಾ ಅಥವಾ ದಿವ್ಯಾ ಸೇಫ್ ಆದರಾ ಎಂಬುದು ಗುರುವಾರ ರಾತ್ರಿ ಎಪಿಸೋಡ್ನಲ್ಲಿ ಗೊತ್ತಾಗಲಿದೆ.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm