ಬ್ರೇಕಿಂಗ್ ನ್ಯೂಸ್
07-03-21 03:34 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಪ್ರಿನ್ಸೆಸ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 37ನೇ ವಸಂತಕ್ಕೆ ಕಾಲಿಡುತ್ತಿರುವ ಸಡಗರದಲ್ಲಿದ್ದಾರೆ ನಟಿ ರಾಧಿಕಾ ಪಂಡಿತ್. ಈ ಸಂಭ್ರಮ-ಸಡಗರದಲ್ಲಿ ತಮ್ಮೆಲ್ಲ ಪ್ರೀತಿಯ ಅಭಿಮಾನಿಗಳಿಗೆ ರಾಧಿಕಾ ಪಂಡಿತ್ ಒಂದು ಪತ್ರ ಬರೆದಿದ್ದಾರೆ.
ರಾಧಿಕಾ ಪಂಡಿತ್ ಬರೆದಿರುವ ಪತ್ರದಲ್ಲಿ ಏನಿದೆ.?
''ನಮಸ್ಕಾರ ಎಲ್ಲರಿಗೂ..
ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದೀರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರೂ ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತಿದ್ದೇನೆ. ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಮತ್ತು ಎಲ್ಲಾ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ - ನಿಮ್ಮ ರಾಧಿಕಾ ಪಂಡಿತ್'' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಆಚರಣೆ
ಜನ್ಮದಿನದ ಸಡಗರವನ್ನು ರಾಧಿಕಾ ಪಂಡಿತ್ ಪ್ರತಿ ವರ್ಷ ಅಭಿಮಾನಿಗಳ ಜೊತೆಗೆ ಸೆಲೆಬ್ರೇಟ್ ಮಾಡುತ್ತಿದ್ದರು. ಅಭಿಮಾನಿಗಳು ತರುತ್ತಿದ್ದ ಕೇಕ್ ಕಟ್ ಮಾಡುವ ಮೂಲಕ ಖುಷಿ ಪಡುತ್ತಿದ್ದರು ರಾಧಿಕಾ ಪಂಡಿತ್. ಆದ್ರೀಗ ಕೋವಿಡ್ ಇರುವ ಕಾರಣ ಅಭಿಮಾನಿಗಳ ಜೊತೆಗಿನ ಬರ್ತಡೇ ಸೆಲೆಬ್ರೇಷನ್ ಗೆ ರಾಧಿಕಾ ಪಂಡಿತ್ ಬ್ರೇಕ್ ಹಾಕಿದ್ದಾರೆ.
ಫ್ಯಾಮಿಲಿ ಜೊತೆಗೆ ಬರ್ತಡೇ
ಪತಿ ರಾಕಿಂಗ್ ಸ್ಟಾರ್ ಯಶ್, ಪುತ್ರ ಯಥರ್ವ್, ಪುತ್ರಿ ಆಯ್ರಾ ಹಾಗೂ ತಂದೆ-ತಾಯಿ ಜೊತೆಗೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ರಾಧಿಕಾ ಪಂಡಿತ್.
ಅಂದ್ಹಾಗೆ, ಪುಟಾಣಿ ಮಕ್ಕಳ ಆರೈಕೆಯಲ್ಲೇ ಬ್ಯುಸಿಯಾಗಿರುವ ರಾಧಿಕಾ ಪಂಡಿತ್ ಯಾವ ಚಿತ್ರವನ್ನೂ ಸದ್ಯಕ್ಕೆ ಒಪ್ಪಿಕೊಂಡಿಲ್ಲ. 'ಆದಿಲಕ್ಷ್ಮಿ ಪುರಾಣ' ಚಿತ್ರದ ಬಳಿಕ ಯಾವುದೇ ಚಿತ್ರಕ್ಕೆ ರಾಧಿಕಾ ಪಂಡಿತ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm