ಬ್ರೇಕಿಂಗ್ ನ್ಯೂಸ್
10-03-21 10:54 am Source: FILMIBEAT ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸ್ಯಾಂಡಲ್ ವುಡ್ ನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಬಣ್ಣದ ಲೋಕದಲ್ಲಿ 25 ವರ್ಷ ಕಳೆದ ಸಂಭ್ರಮವನ್ನು ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ದುಬೈನಲ್ಲಿ ಆಚರಿಸಿಕೊಂಡಿದ್ದರು. ಬುರ್ಜ್ ಖಲೀಫಾ ಮೇಲೆ ತನ್ನ 25 ವರ್ಷದ ಪಯಣದ ಝಲಕ್ ನೋಡಿ ಕಣ್ತುಂಬಿಕೊಂಡಿದ್ದರು. ಇದೀಗ ಕೋಟಿಗೊಬ್ಬ-3 ಸಿನಿಮಾತಂಡ ಕಿಚ್ಚನ ಬೆಳ್ಳಿಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದೆ.
ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಈ ಬಗ್ಗೆ ದೊಡ್ಡದಾಗಿ ಪ್ಲಾನ್ ಮಾಡಿದ್ದಾರೆ. ಚಿತ್ರದ ಘಟಾನುಘಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅಭಿನಯ ಚಿಕ್ರವರ್ತಿ ಸುದೀಪ್ ಅವರ 25 ವರ್ಷದ ಪಯಣವನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಯಾರೆಲ್ಲ ಇರಲಿದ್ದಾರೆ? ಈ ಕಾರ್ಯಕ್ರಮ ಎಲ್ಲಿ ನಡೆಯಲಿದೆ? ಇಲ್ಲಿದೆ ಮಾಹಿತಿ...
ಮಾರ್ಚ್ 15ಕ್ಕೆ ಕಾರ್ಯಕ್ರಮ
ನಿರ್ಮಾಪಕ ಸೂರಪ್ಪ ಬಾಬು ಮತ್ತು ಸಿನಿಮಾತಂಡ ಸೇರಿ ಕಿಚ್ಚನ 25 ವರ್ಷದ ಪಯಣವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ, ಇದೆ ತಿಂಗಳು ಮಾರ್ಚ್ 15ರಂದು ಈ ಕಾರ್ಯಕ್ರಮ ನಡೆಯುತ್ತಿದೆ. ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಚಿತ್ರರಂಗದ ಮತ್ತು ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ
ಸುದೀಪ್ ಬೆಳ್ಳಿ ಮಹೋತ್ಸವದಲ್ಲಿ ಚಿತ್ರರಂಗದ ಗಣ್ಯರ ಜೊತೆಗೆ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ನಿರ್ಮಾಪಕ ಸೂರಪ್ಪ ಬಾಬು ಸಿಎಂ ಯಡಿಯೂರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ, ಕಿಚ್ಚ ಸುದೀಪ್ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎನ್ನಲಾಗುತ್ತಿದೆ.
ಶಿವಣ್ಣ, ರವಿಚಂದ್ರನ್ ಭಾಗಿ
ಸಿನಿಮಾರಂಗದ ಅನೇಕ ಗಣ್ಯರು ಸಹ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಸಾಕಷ್ಟು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಾಸಕ ಮತ್ತು ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್ ಕೂಡ ಹಾಜರಿರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಕೋಟಿಗೊಬ್ಬ-3 ಹಾಡುಗಳಿಗೆ ನೃತ್ಯ ಕಾರ್ಯಕ್ರಮ
ವೇದಿಕೆ ಮೇಲೆ ವಿಶೇಷ ಕಾರ್ಯಕ್ರಗಳು ಸಹ ಜರಿಗಲಿದ್ದು, ಕೋಟಿಗೊಬ್ಬ-3 ಸಿನಿಮಾದ ಹಾಡುಗಳಿಗೆ ವಿವಿಧ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಕಿಚ್ಚ ಸುದೀಪ್ ಅವರ 25 ವರ್ಷದ ಜರ್ನಿಯ ವಿಶೇಷ ವಿಡಿಯೋ ಪ್ರದರ್ಶನ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಕೋಟಿಗೊಬ್ಬ-3 ಸಿನಿಮಾ ಬಗ್ಗೆ
ಶಿವ ಕಾರ್ತಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಕೋಟಿಗೊಬ್ಬ-3 ಸಿನಿಮಾದ ಮೇಕಿಂಗ್ ವಿಡಿಯೋ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದಲ್ಲಿ ಕಿಚ್ಚನಿಗೆ ಜೋಡಿಯಾಗಿ ಮಲಯಾಳಂ ಸುಂದರಿ ಮಡೋನ್ನಾ ಸೆಬಾಸ್ಟಿನ್ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಶ್ರದ್ಧಾ ದಾಸ್, ರವಿ ಶಂಕರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಸಾಕಷ್ಟು ದೊಡ್ಡ ತಾರಬಳಗವೇ ಇದೆ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm