ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am