ಬ್ರೇಕಿಂಗ್ ನ್ಯೂಸ್
14-03-21 02:14 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಕರ್ನಾಟಕ ಮತ್ತು ತೆಲುಗು ರಾಜ್ಯಗಳಲ್ಲಿ ಅದ್ದೂರಿಯಾಗಿ ತೆರೆಕಂಡಿದ್ದ ಸಿನಿಮಾ ಮೊದಲ ದಿನ ಒಟ್ಟು 20 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿತ್ತು. ರಾಬರ್ಟ್ ವಿಜಯಯಾತ್ರೆ ಮುಂದುವರೆದಿದ್ದು, ಎರಡನೇ ದಿನ ಸಹ ದಾಖಲೆಯ ಹಣ ಬಾಚಿಕೊಂಡಿದೆ.
ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ರಾಬರ್ಟ್ 3ನೇ ದಿನದ ಗಳಿಕೆ ಸಹ ಅಚ್ಚರಿ ಮೂಡಿಸಿದೆ. ರಾಬರ್ಟ್ ಪೈರಸಿ: 'ಬಿಗ್ ಬ್ರದರ್ಸ್' ವಿರುದ್ಧ ಉಮಾಪತಿ ಶ್ರೀನಿವಾಸ್ ಗುಡುಗು ರಾಬರ್ಟ್ 3ನೇ ದಿನವೂ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಮೂರನೇ ದಿನ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡುವ ಮೂಲಕ ದಾಖಲೆ ಮಾಡಿದೆ.
ಕನ್ನಡ ಸಿನಿಮಾವೊಂದು ಅದರಲ್ಲೂ ಕೊರೊನಾ ಬಳಿಕ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸ್ಯಾಂಡಲ್ ವುಡ್ ಬೆರಗಾಗಿದೆ. ಮೂರು ದಿನಗಳಲ್ಲಿ ರಾಬರ್ಟ್ ಒಟ್ಟು ಗಳಿಸಿದ್ದೆಷ್ಟು, ಜಿಲ್ಲಾವಾರು ಕಲೆಕ್ಷನ್ ಎಷ್ಟು? ಎನ್ನುವ ವಿವರ ಇಲ್ಲಿದೆ.
3ನೇ ದಿನ 14.10 ಕೋಟಿ ರೂ. ಗಳಿಕೆ
ರಾಬರ್ಟ್ ಸಿನಿಮಾ 3ನೇ ದಿನವೂ ಭರ್ಜರಿ ಕಮಾಯಿ ಮಾಡಿದೆ. ಈಗಾಗಲೇ ಕೋಟಿ ಕೋಟಿ ಜೇಬಿಗಿಳಿಸಿರುವ ನಿರ್ಮಾಪಕರಿಗೆ 3ನೇ ದಿನದ ಗಳಿಕೆ ಸಹ ಭರ್ಜರಿಯಾಗಿ ಸಿಕ್ಕಿದೆ. ಕರ್ನಾಟಕದಲ್ಲಿ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡಿದೆ.
ಜಿಲ್ಲಾವಾರು ಕಲೆಕ್ಷನ್
ಬೆಂಗಳೂರು, ಕೋಲಾರ ಮತ್ತು ತುಮಕೂರು ಹಾಗೂ ಸೌತ್ ಕೆನರಾ ಭಾಗರದಲ್ಲಿ ಒಟ್ಟು 6 ಕೋಟಿ ರೂ. ಕಲೆಕ್ಷನ್ ಆಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ್ ಭಾಗದಲ್ಲಿ 2.5 ಕೋಟಿ ರೂ. ಗಳಿಸಿದೆ. ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ 1.10 ಕೋಟಿ ರೂ., ಶಿವಮೊಗ್ಗದಲ್ಲಿ 1ಲಕ್ಷ, ಹೈದರಾಬಾದ್ ಕರ್ನಾಟಕ 2 ಕೋಟಿ ಮತ್ತು ಬಾಂಬೆ ಕರ್ನಾಟಕ ಭಾಗದಲ್ಲಿ 2 ಕೋಟಿ ರೂ. ಕಲೆಕ್ಷನ್ ಆಗಿದೆ.
ರಾಬರ್ಟ್ ಇದುವರೆಗಿನ ಗಳಿಕೆ ಎಷ್ಟು?
ರಾಬರ್ಟ್ ಸಿನಿಮಾ ರಿಲೀಸ್ ಆಗಿ 3ದಿನಗಳಾಗಿದ್ದು, ಕರ್ನಾಕಟದಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಇದುವರೆಗೂ ರಾಬರ್ಟ್ 44.12 ಕೋಟಿ ರೂ. ಗಳಿಕೆ ಮಾಡಿದ್ದು, ಕನ್ನಡದಲ್ಲಿ ಅತಿ ವೇಗದಲ್ಲಿ ಇಷ್ಟು ಮೊತ್ತದ ಕಲೆಕ್ಷನ್ ಮಾಡಿರುವ ಮೊದಲ ಸಿನಿಮಾ ಇದಾಗಿದೆ. ವೀಕೆಂಡ್ ಬಂದಿರುವುದರಿಂದ ಇವತ್ತಿನ ಕಲೆಕ್ಷನ್ ಕೂಡ ಕುತೂಹಲ ಮೂಡಿಸಿದ್ದು, ನಾಲ್ಕು ದಿನಗಳಲ್ಲೇ 50 ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಲಿದೆ.

ಆಂಧ್ರ-ತೆಲಂಗಾಣದ ಲೆಕ್ಕ
ರಾಬರ್ಟ್ ಸಿನಿಮಾ ಕರ್ನಾಟಕದ ಜೊತೆಗೆ ಆಂಧ್ರ ಮತ್ತು ತೆಲಂಗಾಣದಲ್ಲೂ ಅದ್ದೂರಿಯಾಗಿ ತೆರೆಗೆ ಬಂದಿದೆ. ದರ್ಶನ್ ಸಿನಿಮಾ ತೆಲುಗಿನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಇದೇ ಮೊದಲು. ಆಂಧ್ರ ಮತ್ತು ತೆಲಂಗಾಣದಲ್ಲಿ ಮೊದಲ ದಿನದ ಕಲೆಕ್ಷನ್ ಉತ್ತಮವಾಗಿತ್ತು. ಆದರೆ ನಂತರದ ದಿನಗಳ ಕಲೆಕ್ಷನ್ ರಿಪೋರ್ಟ್ ಬಹಿರಂಗವಾಗಿಲ್ಲ. ತೆಲುಗಿನಲ್ಲೂ ಭರ್ಜರಿ ಕಲೆಕ್ಷನ್ ಆಗಿರುವ ಸಾಧ್ಯತೆ ಇದೆ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm