ಬ್ರೇಕಿಂಗ್ ನ್ಯೂಸ್
15-03-21 11:26 am source: FILMIBEAT ಸಿನಿಮಾ
ನಟಿ ಗೀತಾ ಬಸ್ರಾ ಮತ್ತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಭ್ರಮದ ವಿಚಾರವನ್ನು ಹರ್ಭನ್ ಮತ್ತು ಗೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಮಗಳು ಹಿನಾಯಾ ಜೊತೆ ಗೀತಾ ಮತ್ತು ಹರ್ಭನ್ ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಶೇರ್ ಮಾಡಿ, ಮತ್ತೊಂದು ಮಗುವಿನ ಸ್ವಾಗತಕ್ಕೆ ಸಜ್ಜಾಗಿರುವುದಾಗಿ ಹೇಳಿದ್ದಾರೆ. ಮಗಳು ಹಿನಾಯಾ ಕೈಯಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಹಿಡಿದಿದ್ದು, ಅದರ ಮೇಲೆ ಶೀಘ್ರದಲ್ಲೇ ಸಹೋದರಿ ಆಗಲಿದ್ದೇನೆ ಎಂದು ಬರೆಯಲಾಗಿದೆ. ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಕರೀನಾ ಕಪೂರ್ ಹರ್ಭಜನ್ ಸಿಂಗ್ ಕುಟುಂಬದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟಿ ಗೀತಾ ಬಸ್ರಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಜುಲೈನಲ್ಲಿ ಎರಡನೇ ಮಗು ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಹರ್ಭಜನ್ ಮತ್ತು ಗೀತಾ 2015 ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 5 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಈ ಜೋಡಿ ಬಳಿಕ ಪತಿ-ಪತ್ನಿಯರಾಗಿದ್ದಾರೆ. ಪಂಜಾಬ್ನ ಜಲಂಧರ್ನಲ್ಲಿ ನಡೆದ ಇಬ್ಬರ ಮದುವೆ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಹರ್ಭಜನ್ ಸಿಂಗ್ ಸದ್ಯ ಕ್ರಿಕೆಟ್ನಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಫ್ರೆಂಡ್ ಶಿಪ್ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm