ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am