ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm