ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am