ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm