ಬ್ರೇಕಿಂಗ್ ನ್ಯೂಸ್
22-03-21 02:55 pm Source: FILMIBEAT ಸಿನಿಮಾ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದಲ್ಲಿ ತೆರೆಕಂಡಿದ್ದ ಪೊಗರು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡಿದೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದ ಭರ್ಜರಿ ಗಳಿಕೆ ಕಂಡಿತ್ತು. ಆರು ದಿನಕ್ಕೆ ಪೊಗರು ಸಿನಿಮಾ 48 ಕೋಟಿ ಬಾಚಿಕೊಂಡಿತ್ತು ಎಂದು ಸ್ವತಃ ನಿರ್ಮಾಪಕ ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
ಸುಮಾರು ಮೂರುವರೆ ವರ್ಷದ ಬಳಿಕ ತೆರೆಗೆ ಬಂದಿದ್ದ ಧ್ರುವ ಸರ್ಜಾ ಸಿನಿಮಾ ಕೊರೊನಾ ಭೀತಿಯಲ್ಲೂ ಅಬ್ಬರಿಸಿತ್ತು. ಚಿತ್ರಮಂದಿರಕ್ಕೆ ಜನ ಬರ್ತಾರೋ ಬರಲ್ಲೋ ಎಂಬ ಆತಂಕವನ್ನು ದೂರ ಮಾಡಿ ಹೌಸ್ಫುಲ್ ಪ್ರದರ್ಶನ ಕಂಡಿತ್ತು. ಹೀಗೆ, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿದ ಪೊಗರು ಸಿನಿಮಾ ಈಗ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಬಿಡುಗಡೆಯಾದ ಒಂದೇ ತಿಂಗಳಲ್ಲಿ ಪೊಗರು ಟಿವಿಯಲ್ಲಿ ಮೂಡಿಬರುತ್ತಿದೆ. ಮುಂದೆ ಓದಿ...
ಹಿಂದಿಯಲ್ಲಿ ಪೊಗರು ಪ್ರಸಾರ
ಪೊಗರು ಸಿನಿಮಾದ ಹಿಂದಿ ಅವತರಣಿಕೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಏಪ್ರಿಲ್ ತಿಂಗಳಲ್ಲಿ ಪೊಗರು ಸಿನಿಮಾ ಟಿವಿಯಲ್ಲಿ ಮೂಡಿಬರಲಿದೆ ಎಂದು ಪ್ರೋಮೋ ಬಿಡುಗಡೆಯಾಗಿದೆ. ಕಲರ್ಸ್ ಸಿನಿಫ್ಲೆಕ್ಸ್ ಚಾನಲ್ನಲ್ಲಿ ಪೊಗರು ಹಿಂದಿ ವರ್ಷನ್ ಪ್ರಸಾರವಾಗಲಿದೆ. ಏಪ್ರಿಲ್ ತಿಂಗಳು ಎಂದು ಪ್ರಕಟಿಸಿದ್ದು, ನಿಖರವಾದ ದಿನಾಂಕ ತಿಳಿಸಿಲ್ಲ.
ದುಬಾರಿ ಬೆಲೆಗೆ ಪೊಗರು ಹಕ್ಕು ಮಾರಾಟ
ದಕ್ಷಿಣದ ಮೂರು ಭಾಷೆಗಳಲ್ಲಿ ಅದ್ಧೂರಿ ಓಪನಿಂಗ್ ಪಡೆದುಕೊಂಡಿದ್ದ ಪೊಗರು ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡಿತು. ಆದರೆ, ವಿಮರ್ಶಾತ್ಮಕವಾಗಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೂ, ಹಿಂದಿಯಲ್ಲಿ ದುಬಾರಿ ಬೆಲೆ ಕೊಟ್ಟು ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದರು. 7.2 ಕೋಟಿಗೆ ಪೊಗರು ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು ಮಾರಾಟವಾಗಿತ್ತು ಎಂಬ ಮಾಹಿತಿ ಇದೆ.

ಫೆಬ್ರವರಿ 19ರಂದು ಬಿಡುಗಡೆಯಾಗಿದ್ದ ಪೊಗರು
ಪೊಗರು ಸಿನಿಮಾ ಫೆಬ್ರವರಿ 19ರಂದು ಬಿಡುಗಡೆಯಾತ್ತು. ನಂದಕಿಶೋರ್ ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಧನಂಜಯ್, ಸಂಪತ್ ರಾಜ್, ಚಿಕ್ಕಣ್ಣ, ರಾಘವೇಂದ್ರ ರಾಜ್ ಕುಮಾರ್, ಕುರಿ ಪ್ರತಾಪ್, ರವಿಶಂಕರ್, ಪವಿತ್ರ ಲೋಕೇಶ್ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದರು. ಚಂದನ್ ಶೆಟ್ಟಿ ಸಂಗೀತ ನೀಡಿದ್ದರು.

ದುಬಾರಿ ಚಿತ್ರ ಆರಂಭಿಸಿದ ಧ್ರುವ ಸರ್ಜಾ
ಪೊಗರು ನಂತರ ಮತ್ತೆ ನಂದಕಿಶೋರ್ ಜೊತೆ ಧ್ರುವ ಸರ್ಜಾ ಸಿನಿಮಾ ಆರಂಭಿಸಿದ್ದಾರೆ. ಉದಯ್ ಮೆಹ್ತಾ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಈ ಚಿತ್ರಕ್ಕೆ ದುಬಾರಿ ಎಂದು ಹೆಸರಿಡಲಾಗಿದೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಮುಗಿಸಿ, ಮುಹೂರ್ತ ಸಹ ನಡೆದಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm