ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm