ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm