ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm