ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm