ಬ್ರೇಕಿಂಗ್ ನ್ಯೂಸ್
30-03-21 12:17 pm Source: FILMIBEAT ಸಿನಿಮಾ
ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಭಾನುವಾರ ಬೆಳಗ್ಗೆ ಬೆಂಗಳೂರಿನ ದೇವಸ್ಥಾನದಲ್ಲಿ ಮಂಡ್ಯ ಮೂಲದ ಸಿವಿಲ್ ಇಂಜಿನಿಯರ್ ನಾಗಾರ್ಜುನ್ ಜೊತೆ ಸರಳವಾಗಿ ಮದುವೆಯಾಗಿದ್ದರು. ಬೆಳಗ್ಗೆ ಮದುವೆ ಆಗಿ ಸಂಜೆ ವೇಳೆಗೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಮೂಲಕ ಮದುವೆ ವಿವಾದ ಸ್ವರೂಪ ಪಡೆದುಕೊಂಡಿತು.
ಮದುವೆಯಾದ ಕೆಲವೇ ಗಂಟೆಗಳಲ್ಲಿ ನಾಗಾರ್ಜುನ್ ಮನೆಯವರು ಗಲಾಟೆ ಮಾಡಿ, ಬಲವಂತವಾಗಿ ತಾಳಿಕಟ್ಟಿಸಿಕೊಂಡಿದ್ದಾರೆ ಎಂದು ಚೈತ್ರಾ ವಿರುದ್ಧ ಆರೋಪಿಸಿದ್ದಾರೆ. ಪ್ರೀತಿಸಿ, ಒಪ್ಪಿಗೆ ಇದ್ದೇ ಮದುವೆ ಆಗಿದ್ದು ಎಂದು ಚೈತ್ರಾ ಹೇಳುತ್ತಿದ್ದಾರೆ. ನಾಗಾರ್ಜುನ್ ಮತ್ತು ಚೈತ್ರಾ ಇಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ.

ಕೋಲಾರ ಮಹಿಳಾ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದ್ದು, ಇಬ್ಬರಿಗೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಬುಧವಾರದ ವರೆಗೂ ಸಮಯ ನೀಡಲಾಗಿದೆ. ಈ ನಡುವೆ ಈಗ ಚೈತ್ರಾ ಮತ್ತು ನಾಗಾರ್ಜುನ್ ಜೊತೆ ಇರುವ ಫೋಟೋಗಳು ವೈರಲ್ ಆಗಿವೆ. ಮುಂದೆ ಓದಿ..
6ತಿಂಗಳಿಂದ ಚೈತ್ರಾ ನಂಬರ್ ಬ್ಲಾಕ್ ಮಾಡಿದ್ದೆ
ನಾಗಾರ್ಜುನ್, ಚೈತ್ರಾ ಅವರನ್ನು ಕೆಲವೇ ಕೆಲವು ಬಾರಿ ಮಾತ್ರ ಭೇಟಿ ಮಾಡಿರುವುದು. ಆರು ತಿಂಗಳಿಂದ ಅವರ ಫೋನ್ ನಂಬರ್ ಬ್ಲಾಕ್ ಮಾಡಿರುವುದಾಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಆದರೆ ಚೈತ್ರಾ, ಇಬ್ಬರ ನಡುವೆ ಹೆಚ್ಚು ಆಪ್ತತೆ ಇತ್ತು, ಪ್ರೀತಿಸುತ್ತಿದ್ದೆವು, ಒಪ್ಪಿಗೆ ಇದ್ದೇ ಮದುವೆ ಆಗಿದ್ದು ಎಂದು ವಾದಿಸುತ್ತಿದ್ದಾರೆ.
ವೈರಲ್ ಆಗಿವೆ ಫೋಟೋಗಳು
ಇದೀಗ ಇಬ್ಬರ ಆಪ್ತತೆ ಮತ್ತು ಭೇಟಿಯಾಗಿರುವ ಬಗ್ಗೆ ಕೆಲವು ಫೋಟೋಗಳು ಮತ್ತು ವಿಡಿಯೋಗಳು ಸಾಕ್ಷಿ ಹೇಳುತ್ತಿವೆ. ಚೈತ್ರಾ, ನಾಗಾರ್ಜುನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿ, ಗಿಫ್ಟ್ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಈಗ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಹುಟ್ಟುಹಬ್ಬಕ್ಕೆ ಗಿಫ್ಟ್ ಆಗಿ ಬ್ರೇಸ್ಲೇಟ್ ಕೊಟ್ಟಿರುವುದಾಗಿ ಚೈತ್ರಾ ಹೇಳುತ್ತಿದ್ದಾರೆ. ಇಷ್ಟೆಲ್ಲ ಆಪ್ತತೆ ಇದ್ದರೂ ನಾಗಾರ್ಜುನ್ ಪ್ರೀತಿಸಿಲ್ಲ, ಬಲವಂತದ ಮದುವೆ ಎಂದು ಹೇಗೆ ಹೇಳುತ್ತಿದ್ದಾರೆ ಎಂದು ಚೈತ್ರಾ ಪ್ರಶ್ನಿಸುತ್ತಿದ್ದಾರೆ.
ಮಾತುಕತೆ ಮೂಲಕ ಬಗೆಹರಿಯುತ್ತಾ ವಿವಾದ?
ನಾಗಾರ್ಜುನ್ ಮನೆಯವರು ಕೊಲೆ ಬೆದರಿಕೆ ಹಾಕಿದ್ದಾರೆ, ನಡತೆಗೆಟ್ಟವಳು ಎಂದಿದ್ದಾರೆ ಎಂದು ಚೈತ್ರಾ ಆರೋಪ ಮಾಡಿದ್ದಾರೆ. ಸದ್ಯ ಈ ವಿವಾದವನ್ನು ಕೂತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಬುಧವಾರದ ವರೆಗೂ ಸಮಯ ನೀಡಲಾಗಿದೆ. ಮಾತುಕತೆ ಮೂಲಕ ಬಗೆಹರಿಸಕೊಳ್ಳುತ್ತಾರಾ ಎಂದು ಕಾದುನೋಡಬೇಕು.

ಚೈತ್ರಾ ಮುಂದಿನ ನಿರ್ಧಾರವೇನು?
ಒಂದು ವೇಳೆ ಮಾತುಕತೆಗೆ ಬಂದಿಲ್ಲವಾದರೆ ಮುಂದಿನ ಕ್ರಮದ ಕುರಿತು ಯೋಚಿಸಬೇಕಾಗುತ್ತೆ ಎಂದು ಚೈತ್ರಾ ಹೇಳಿದ್ದಾರೆ. ಹಾಗಾಗಿ ಚೈತ್ರಾ ಮುಂದಿನ ನಿರ್ಧಾರವೇನು, ಯಾವ ಹೆಜ್ಜೆ ಇಡಲಿದ್ದಾರೆ ಎಂದು ಕಾದುನೋಡಬೇಕು.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm