ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm