ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm