ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am