ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm