ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am