ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm