ಬ್ರೇಕಿಂಗ್ ನ್ಯೂಸ್
02-04-21 11:22 am Source: FILMIBEAT Shruthi Gk ಸಿನಿಮಾ
ಏ.02: ಬಾಲಿವುಡ್ನ ಖ್ಯಾತ ನಟಿ ಅಲಿಯಾ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಈಗ ಅಲಿಯಾಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅಲಿಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಕೊರೊನಾ ಪಾಸಿಟಿವ್ ವರದಿ ಬಂದಿದೆ, ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. 'ನನಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ನಾನು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.
ಕಳೆದ ಎರಡು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ನಟ ರಣಬೀರ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ರಣಬೀರ್ ಚೇತರಿಸಿಕೊಂಡಿದ್ದಾರೆ. ಅಲಿಯಾ ಸದ್ಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ ಚಿತ್ರೀಕರಣವನ್ನು ಮುಂದೂಡಲಾಗಿತ್ತು.
ಇದೀಗ ನಾಯಕಿ ಅಲಿಯಾಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಚಿತ್ರೀಕರಣ ಮತ್ತೆ ಮುಂದೂಡಲಾಗಿದೆ. ಅಲಿಯಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸ್ನೇಹಿತರು ಹಾರೈಸುತ್ತಿದ್ದಾರೆ. ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಬೇಕಿದೆ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿನಿಮಾ ಶೂಟಿಂಗ್, ಪ್ರಮೋಷನ್ ಜೊತೆಗೆ ಆರೋಗ್ಯದ ಕಡೆಯೂ ಎಚ್ಚರಿಕೆ ವಹಿಸಲಿ ಎನ್ನುವುದು ಎಲ್ಲರ ಆಶಯ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm