ಬ್ರೇಕಿಂಗ್ ನ್ಯೂಸ್
02-04-21 11:22 am Source: FILMIBEAT Shruthi Gk ಸಿನಿಮಾ
ಏ.02: ಬಾಲಿವುಡ್ನ ಖ್ಯಾತ ನಟಿ ಅಲಿಯಾ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಈಗ ಅಲಿಯಾಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅಲಿಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಕೊರೊನಾ ಪಾಸಿಟಿವ್ ವರದಿ ಬಂದಿದೆ, ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. 'ನನಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ನಾನು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.
ಕಳೆದ ಎರಡು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ನಟ ರಣಬೀರ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ರಣಬೀರ್ ಚೇತರಿಸಿಕೊಂಡಿದ್ದಾರೆ. ಅಲಿಯಾ ಸದ್ಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ ಚಿತ್ರೀಕರಣವನ್ನು ಮುಂದೂಡಲಾಗಿತ್ತು.
ಇದೀಗ ನಾಯಕಿ ಅಲಿಯಾಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಚಿತ್ರೀಕರಣ ಮತ್ತೆ ಮುಂದೂಡಲಾಗಿದೆ. ಅಲಿಯಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸ್ನೇಹಿತರು ಹಾರೈಸುತ್ತಿದ್ದಾರೆ. ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಬೇಕಿದೆ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿನಿಮಾ ಶೂಟಿಂಗ್, ಪ್ರಮೋಷನ್ ಜೊತೆಗೆ ಆರೋಗ್ಯದ ಕಡೆಯೂ ಎಚ್ಚರಿಕೆ ವಹಿಸಲಿ ಎನ್ನುವುದು ಎಲ್ಲರ ಆಶಯ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am