ಬ್ರೇಕಿಂಗ್ ನ್ಯೂಸ್
02-04-21 02:53 pm Source: FILMIBEAT ಸಿನಿಮಾ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲೂ ಬ್ಯುಸಿಯಾಗುವ ಸೂಚನೆ ಸಿಕ್ಕಿದೆ. ಮೊದಲ ಸಿನಿಮಾ ಬಿಡುಗಡೆಗೂ ಮುಂಚೆಯೇ ಎರಡನೇ ಹಿಂದಿ ಚಿತ್ರ ಕೈಗೆತ್ತಿಕೊಂಡಿದ್ದ ನಟಿ ಈಗ ಶೂಟಿಂಗ್ ಆರಂಭಿಸಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ 'ಗುಡ್ ಬೈ' ಚಿತ್ರದ ಮುಹೂರ್ತ ಇಂದು ಮುಂಬೈನಲ್ಲಿ ನಡೆದಿದೆ. 'ಗುಡ್ ಬೈ' ಸಿನಿಮಾದ ಪೂಜೆ ಕಾರ್ಯಕ್ರಮದ ಪೋಟೋಗಳನ್ನು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ವಿಕಾಸ್ ಭಾಲ್ ಈ ಚಿತ್ರ ನಿರ್ದೇಶನ ಮಾಡ್ತಿದ್ದು, ರಿಲಾಯನ್ಸ್ ಎಂಟರ್ಟೈನ್ಮೆಂಟ್ ಮತ್ತು ಬಾಲಾಜಿ ಟೆಲಿಫಿಲಂಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಇದಕ್ಕೂ ಮುಂಚೆ ಸಿದ್ಧಾರ್ಥ್ ಮಲ್ಹೋತ್ರ ನಟಿಸುತ್ತಿರುವ 'ಮಿಷನ್ ಮಜ್ನು' ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ರಶ್ಮಿಕಾಗೆ ಮೊದಲ ಹಿಂದಿ ಸಿನಿಮಾ. ಈ ಚಿತ್ರದ ಚಿತ್ರೀಕರಣ ಅದಾಗಲೇ ಆರಂಭವಾಗಿದ್ದು, ಮೊದಲ ಹಂತದ ಶೂಟಿಂಗ್ನಲ್ಲಿ ನಟಿ ಭಾಗವಹಿಸಿದ್ದರು. ಕನ್ನಡ, ತೆಲುಗಿನಲ್ಲಿ ಸಕ್ಸಸ್ ಕಂಡಿದ್ದ ನಟಿ ರಶ್ಮಿಕಾ ಈಗ ತಮಿಳು ಹಾಗೂ ಹಿಂದಿಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ರಶ್ಮಿಕಾ ನಟಿಸಿರುವ ಮೊದಲ ತಮಿಳು ಸಿನಿಮಾ ಏಪ್ರಿಲ್ 2 ರಂದು ಬಿಡುಗಡೆಯಾಗಿದೆ. ಕಾರ್ತಿ ನಟನೆಯ 'ಸುಲ್ತಾನ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದರು. ಈ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಇಂದು ತೆರೆಕಂಡಿದೆ. ಇನ್ನು ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಶರ್ವಾನಂದ್ ನಟಿಸುತ್ತಿರುವ ಹೊಸ ಪ್ರಾಜೆಕ್ಟ್ನಲ್ಲೂ ರಶ್ಮಿಕಾ ನಾಯಕಿಯಾಗಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am