ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm