ಬ್ರೇಕಿಂಗ್ ನ್ಯೂಸ್
09-04-21 03:42 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪಾಸಿಟಿವ್ ವರದಿ ಬಂದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಸುದ್ದಿ ಜನ್ಯ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಶಾಕ್ ನೀಡಿತ್ತು. ಬಳಿಕ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಸಂಗೀತ ಕೆಲಸಗಳ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿ ಇರುವ ಅರ್ಜುನ್ ಜನ್ಯ ಸದ್ಯ ಡಾನ್ಸ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾದ ಜೊತೆ ಮಾತನಾಡಿದ ಅರ್ಜುನ್ ಜನ್ಯ, 'ತಡವಾಗಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದಿದ್ದಾರೆ.
ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿದ್ದೇವೆ, ತುಂಬಾ ಜಾಗರೂಕರಾಗಿ ಇದ್ದರೂ ಸಹ ಹೇಗೆ ಕೊರೊನಾ ವೈರಸ್ ಬಂದಿದೆ ಎನ್ನುವುದು ಖಚಿತವಿಲ್ಲ ಎಂದಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಂಡು ಮನೆಗೆ ಮರಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಸಾಕಷ್ಟು ಹಿಟ್ ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ದರ್ಶನ್ ನಟನೆಯ ಸೂಪರ್ ಹಿಟ್ ರಾಬರ್ಟ್ ಸಿನಿಮಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.
This News Article Is A Copy Of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm